ಕೊಪ್ಪಳ: ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಬಂದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅವರು, ಗಂಗಾವತಿಯ ಅಭಿವೃದ್ಧಿಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅಡ್ಡಿ ಆಗುತ್ತಿದ್ದಾರೆ. ಸೋಲಿನ ಹತಾಶೆ ಇಕ್ಬಾಲ್ ಅನ್ಸಾರಿಯನ್ನು ಕಾಡುತ್ತಿದೆ. ಗಂಗಾವತಿ ಅಭಿವೃದ್ಧಿಗೆ ಸಹಕಾರ ಕೊಡುತ್ತಿಲ್ಲ. ಕ್ಲುಲ್ಲಕ ವಿಚಾರದಲ್ಲೂ ಅಭಿವೃದ್ಧಿಯಲ್ಲಿ ಅಡ್ಡಿ ಆಗುತ್ತಿದ್ದಾರೆ. ಎಂಪಿ ಚುನಾವಣೆ ಆದ ಮೇಲೆ ಕಾಂಗ್ರೆಸ್ ನವರು ಇಕ್ಬಾಲ್ ಅನ್ಸಾರಿಯನ್ನು ಡಸ್ಟ್ ಬಿನ್ಗೆ ಹಾಕುತ್ತಾರೆ ಎಂದರು.