ಕೊಪ್ಪಳ: ಕಳೆದ ವರ್ಷ ಬಸವಣ್ಣ ವೃತ್ತದ ಬಳಿಯ ಮನೆಯಿಂದ ಕಳುವಾಗಿದ್ದ 40 ಗ್ರಾಂ ತೂಕದ ಚಿನ್ನದ ಸರವನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ನಗರದ ಬಸವಣ್ಣ ವೃತ್ತದಲ್ಲಿರುವ ಮಲ್ಲಮ್ಮ ಗಂಡ ಶಿವಪ್ಪ ಖೇಡ್ ಅವರ ಮನೆಯಿಂದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂತಿಮವಾಗಿ ಪೊಲೀಸರು ಕಳ್ಳರನ್ನು ಬಂಧಿಸಿ ವಿಚಾರಣೆ ನಡೆಸಿದರು. ಕಳ್ಳರು ಕಳ್ಳತನ ಮಾಡಿ ಚಿನ್ನದ ಅಂಗಡಿಗೆ ಮಾರಾಟ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸಿ ಮಾಂಗಲ್ಯ ಸರವನ್ನು ವಶಪಡಿಸಿಕೊಂಡು ನ್ಯಾಯಾಲಯದ ಆದೇಶದಂತೆ ಮಾಲೀಕರಿಗೆ ಹಸ್ತಾಂತರಿಸಿದರು.