ಕೊಪ್ಪಳ: ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವ ಪೋಸ್ಟರ್ ಹಿಡಿಯಲು ಹಿಂದೇಟು ಹಾಕಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕು ಕುದುರಿಮೋತಿ ಗ್ರಾಮದಲ್ಲಿ ನಡೆದಿದೆ.
ಮುಸ್ಲಿಂ ಸಮುದಾಯಕ್ಕೆ ಸೇರಿದ ಗ್ರಾಮ ಪಂಚಾಯತ್ ಅಧ್ಯಕ್ಷೆ ಫರೀದಾ ಬೇಗಂ ಅವರು ಮೋದಿ ಭಾವಚಿತ್ರ ಇರುವ ಪೋಸ್ಟರ್ ಹಿಡಿಯಲು ನಿರಾಕರಿಸಿದ್ದಾರೆ. ಕಳೆದ 15 ದಿನದ ಹಿಂದೆ ಘಟನೆ ನಡೆದಿದ್ದು, ಈಗ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗುತ್ತಿದೆ.
ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ನಲ್ಲಿ ವೀಡಿಯೋ ಮಾಡಿದ್ದಾರೆ.