ಕೊಪ್ಪಳ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಮತ್ತು ಪ್ರಗತಿ ನಗರ ನಡುವಿನ ಹಳ್ಳದ ಬಳಿ ನ.30ರ ಬುಧವಾರ ಬೆಳಗ್ಗೆ 5.30ಕ್ಕೆ ನಡೆದ ಈ ಘಟನೆ ಶ್ರೀರಾಮನಗರದ ದುರ್ಗಾ ಸ್ವೀಟ್ ಶಾಪ್ ಮಾಲೀಕ ನಾಗೇಶ್ ರಾವ್ (46) ಮೃತ ದುರ್ದೈವಿ.
ವಿದ್ಯಾನಗರದ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತವನ್ನು ತೆಗೆದುಕೊಳ್ಳಲು ಹಿರಿಯ ಸ್ವಾಮಿಗಳೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ವಾಹನ ಚಲಾಯಿಸುತ್ತಿದ್ದ ನಾಗೇಶ್ ರಾವ್ ಸ್ಥಳದಲ್ಲೇ ಮೃತಪಟ್ಟರೆ, ಅಂಜೂರಿ ಕ್ಯಾಂಪ್ ನ ಶೇಷಾದ್ರಿ ರಾವ್ ಮತ್ತು ಸುರೇಶ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.