ಕೊಪ್ಪಳ: ಮದ್ಯ ಸೇವಿಸಿ ಹಣ ನೀಡಲು ನಿರಾಕರಿಸಿದ ವ್ಯಕ್ತಿಯೊಬ್ಬರು ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿ ನಾಪತ್ತೆಯಾಗಿರುವ ದಾರುಣ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ರಂಗಾಪುರ ಜಂಗ್ಲಿ ಕ್ಯಾಂಪ್ ನಲ್ಲಿ ನಡೆದಿದೆ.
ರಂಗಾಪುರ ಜಂಗ್ಲಿ ಕ್ಯಾಂಪ್ ನಿವಾಸಿ ರವಿ ಅವರ ತಂದೆ ಲಕ್ಷ್ಮಣ್ ನಾಯಕ್ (30) ಅವರು ಮದ್ಯ ಸೇವಿಸಲು ತಮ್ಮ ಕುಟುಂಬದಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು, ಅವರ ಕುಟುಂಬವು ಹಣವನ್ನು ನೀಡಲು ನಿರಾಕರಿಸಿದ ಕಾರಣ ಮಂಗಳವಾರ ಬೆಳಿಗ್ಗೆ ಗ್ರಾಮದ ಎಡದಂಡೆ ಕಾಲುವೆಗೆ ಹಾರಿದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳವು ಅವರನ್ನು ಪತ್ತೆಹಚ್ಚಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಸಿಪಿಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.