News Karnataka Kannada
Monday, May 06 2024
ಕೊಪ್ಪಳ

ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ಹಲ್ಲೆ

ಕೊಪ್ಪಳ  ಜಿಲ್ಲೆಯ ಗಂಗಾವತಿಯ  ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದ್ದಾರೆ.
Photo Credit : NewsKarnataka

ಕೊಪ್ಪಳ: ಕೊಪ್ಪಳ  ಜಿಲ್ಲೆಯ ಗಂಗಾವತಿಯ  ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದ್ದಾರೆ.

ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಸದ್ಯ ಗಾಯಾಳು ಕುಮಾರ್ ರಾಠೋಡ್​ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀರಾಮನಗರದ ಸನ್​ ಶೈನ್ ಬಾರ್​ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ  ಅದೇ ವೇಳೆ ಮುಸ್ಲಿಂ ಯವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆ ಏನು?: ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ವಿಚಾರವಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುಮಾರ್ ರಾಠೋಡ್​ಗೆ ಮದ್ಯಪಾನದ ಚಟವಿದೆ. ಬಾರ್​​ನಲ್ಲಿ ಗ್ಲಾಸಿಗೆ ನೀರು ಸುರಿಯುವ ಸಂದರ್ಭ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಹನುಮ ಜಯಂತಿ ಇರುವ ಕಾರಣ ಆತ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ ಮುಸ್ಲಿಂ ಯುವಕನೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. ಕೆಲವು ನಿಮಿಷಗಳ ನಂತರ ಬಾರ್​​ನಿಂದ ಹೊರಬಂದಾಗ ಅವರ ಸಮುದಾಯದ 20ರಿಂದ 30 ಮಂದಿ ಅಲ್ಲಿಗೆ ಬಂದು ಕುಮಾರ್ ರಾಠೋಡ್ ಮೇಲೆ ಹಲ್ಲೆ ಮಾಡಿದ್ದಾರೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು