ಕೊಪ್ಪಳ: ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂದು ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿರುವ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ಅ.10 ರಂದು ಕುಷ್ಟಗಿ ತಾ| ಎಂ. ಗುಡದೂರು ಗ್ರಾಮದ ಕಾಂಗ್ರೆಸ್ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡರೂ ಆರೋಪಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಂತ್ರಸ್ತೆಯ ಮಾವ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಮನವಿ ಮಾಡಿದರು.
ಆದರೆ ಅಮರೇಗೌಡ ಬಯ್ಯಾಪುರ ಅವರು ಆರೋಪಿ ಪರವಾಗಿಯೇ ನಿಲುವು ತಾಳಿದ್ದು, ಜಿಲ್ಲಾ ಎಸ್ಪಿ ಅವರಿಗೆ ದೂರು ನೀಡಬಾರದಿತ್ತು ಎಂದು ಯಮನೂರಪ್ಪ ಅವರಿಗೆ ಹೇಳಿದ್ದಾರೆ. ಅಲ್ಲದೆ ʼಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡಣ. ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ದು ಅಮರೇಗೌಡ ಬಯ್ಯಾಪುರ ಸಂತ್ರಸ್ತೆ ಮಾವನಿಗೆ ಹೇಳಿದ್ದಾರೆ. ಸದ್ಯ ಮಾಜಿ ಶಾಸಕನ ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.