ಕೊಪ್ಪಳ: ಸಾಂಕ್ರಾಮಿಕ ಜ್ವರದಿಂದ ತತ್ತರಿಸಿರುವ ಗ್ರಾಮಸ್ಥರಿಗೆ, ಗ್ರಾಮದ ದೇವಸ್ಥಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಈ ಅವ್ಯವಸ್ಥೆ ನಡೆದಿರುವುದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಗ್ರಾಮದಲ್ಲಿ.
ವೈರಲ್ ಜ್ವರವು ಗ್ರಾಮವನ್ನು ಆವರಿಸಿದ ನಂತರ ನೂರಕ್ಕೂ ಹೆಚ್ಚು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಒಂದು ತಿಂಗಳ ಹಿಂದೆ ಜ್ವರದ ಪ್ರಕರಣಗಳು ಪ್ರಾರಂಭವಾದಾಗ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಕಳೆದ ಎರಡು ದಿನಗಳಲ್ಲಿ ಇದ್ದಕ್ಕಿದ್ದಂತೆ ಪ್ರಕರಣಗಳ ಸಂಖ್ಯೆ 100 ದಾಟಿದೆ.
ಸ್ಥಳೀಯ ಆರೋಗ್ಯ ಅಧಿಕಾರಿಗಳು ಕೆಲವು ಗ್ರಾಮಸ್ಥರನ್ನು ಭೀಮಾಂಬಿಕಾ ದೇವಸ್ಥಾನಕ್ಕೆ ಸ್ಥಳಾಂತರಿಸಿದರು. ಭೀಮಾಂಬಿಕಾ ದೇವಾಲಯ ಈಗ ಆಸ್ಪತ್ರೆಯ ರೀತಿ ಬದಲಾಗಿದೆ, ಕೆಲವರಿಗೆ IV ಹಾಕಲಾಗಿದೆ.
ನೆರೆಬೆಂಚಿ ಗ್ರಾಮದಲ್ಲಿ ಒಟ್ಟು 1,200 ಜನಸಂಖ್ಯೆ ಇದ್ದು, ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ. ಸುತ್ತಮುತ್ತಲಿನ ನೀರು, ಸ್ವಚ್ಛತೆ ಇಲ್ಲದೇ ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗುರುವಾರ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ, ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಸಿಬ್ಬಂದಿಗೆ ತಿಳಿಸಿದರು.