Categories: ಕೊಪ್ಪಳ

ಗ್ರಾಮಸ್ಥರಿಗೆಲ್ಲಾ ಸಾಂಕ್ರಾಮಿಕ ಜ್ವರ: ಆಸ್ಪತ್ರೆ ಆಯ್ತು ದೇವಾಲಯ

ಕೊಪ್ಪಳ: ಸಾಂಕ್ರಾಮಿಕ ಜ್ವರದಿಂದ  ತತ್ತರಿಸಿರುವ ಗ್ರಾಮಸ್ಥರಿಗೆ, ಗ್ರಾಮದ ದೇವಸ್ಥಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಈ ಅವ್ಯವಸ್ಥೆ ನಡೆದಿರುವುದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಗ್ರಾಮದಲ್ಲಿ.

ವೈರಲ್ ಜ್ವರವು ಗ್ರಾಮವನ್ನು ಆವರಿಸಿದ ನಂತರ ನೂರಕ್ಕೂ ಹೆಚ್ಚು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಒಂದು ತಿಂಗಳ ಹಿಂದೆ ಜ್ವರದ ಪ್ರಕರಣಗಳು ಪ್ರಾರಂಭವಾದಾಗ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಕಳೆದ ಎರಡು ದಿನಗಳಲ್ಲಿ ಇದ್ದಕ್ಕಿದ್ದಂತೆ ಪ್ರಕರಣಗಳ ಸಂಖ್ಯೆ 100 ದಾಟಿದೆ.

ಸ್ಥಳೀಯ ಆರೋಗ್ಯ ಅಧಿಕಾರಿಗಳು ಕೆಲವು ಗ್ರಾಮಸ್ಥರನ್ನು ಭೀಮಾಂಬಿಕಾ ದೇವಸ್ಥಾನಕ್ಕೆ ಸ್ಥಳಾಂತರಿಸಿದರು. ಭೀಮಾಂಬಿಕಾ ದೇವಾಲಯ ಈಗ ಆಸ್ಪತ್ರೆಯ ರೀತಿ ಬದಲಾಗಿದೆ,  ಕೆಲವರಿಗೆ IV  ಹಾಕಲಾಗಿದೆ.

ನೆರೆಬೆಂಚಿ ಗ್ರಾಮದಲ್ಲಿ ಒಟ್ಟು 1,200 ಜನಸಂಖ್ಯೆ ಇದ್ದು, ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ. ಸುತ್ತಮುತ್ತಲಿನ ನೀರು, ಸ್ವಚ್ಛತೆ ಇಲ್ಲದೇ ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗುರುವಾರ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ, ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಸಿಬ್ಬಂದಿಗೆ ತಿಳಿಸಿದರು.

Ashika S

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

16 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

27 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago