News Karnataka Kannada
Monday, April 29 2024
ರಾಯಚೂರು

ಕಲುಷಿತ ನೀರು ಪೂರೈಕೆ: ರಾಯಚೂರಿನಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆ

Police in Mulubagil emptying a lake to investigate 8 years old murder case
Photo Credit :

ರಾಯಚೂರು: ನಗರದಲ್ಲಿ ಕಲುಷಿತ ನೀರು ಪೂರೈಕೆಯಿಂದ ವಾಂತಿಭೇದಿ ಉಲ್ಬಣಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣದಲ್ಲಿ ಇಂದು(ಜೂ.8) ಮತ್ತೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿದೆ.

ರಾಂಪುರ ಜಲಾಶಯದಿಂದ ನಗರದ 14 ವಾರ್ಡ್​ಗಳಿಗೆ ನೀರನ್ನು ಶುದ್ಧೀಕರಿಸದೆ ಪೂರೈಕೆ ಮಾಡುತ್ತಿರುವುದರಿಂದ ಈ ನೀರನ್ನು ಕುಡಿದವರ ಆರೋಗ್ಯ ಹದಗೆಟ್ಟಿದೆ.

ಮೇ 31ರಂದು ಕಲುಷಿತ ನೀರು ಕುಡಿದು ಮಕ್ಕಳು ಸೇರಿ ನೂರಾರು ಮಂದಿ ಅಸ್ವಸ್ಥಗೊಂಡಿದ್ದರು. ಅಂದು ಇಂದಿರಾ ನಗರದ ಮಲ್ಲಮ್ಮ(40) ವಾಂತಿಯಿಂದ ಮೃತಪಟ್ಟಿದ್ದಳು. ಸಾವಿನ ಸರಣಿ ಮುಂದುವರಿದಿದ್ದು, ಇದುವರೆಗೆ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.

ಮಲ್ಲಮ್ಮ ಮೃತಪಟ್ಟ ಮೂರು ದಿನಕ್ಕೆ 7 ವಾರ್ಡ್​ನ ಅಬ್ದುಲ್ ಗಫೂರ್(37) ಕೊನೆಯುಸಿರೆಳೆದಿದ್ದರು. ನಂತರ ಅರಬ್ ಮೊಹಲ್ಲಾದ ಮಹ್ಮದ ನೂರ್(43) ಎಂಬುವವರು ಮೃತಪಟ್ಟರು. ನಗರಸಭೆ ಎಚ್ಚೆತ್ತ ನಗರಸಭೆ ನೀರು ಶುದ್ಧೀಕರಣ ಘಟಕದ ಸ್ವಚ್ಛತೆಗೆ ಮುಂದಾಯಿತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಪೌರಾಡಳಿತ ನಿರ್ದೇಶಕರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು. ಮೃತರ ಮೂರು ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದರ ನಡುವೆ ನಗರಸಭೆಯು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದೆ. ಆದರೆ, ಸಾವಿನ ಸರಣಿ ಮಾತ್ರ ನಿಂತಿಲ್ಲ. ಇದೇ ಪ್ರಕರಣದಲ್ಲಿ ಅಸ್ವಸ್ಥಗೊಂಡ ಮತ್ತೊಬ್ಬ ವ್ಯಕ್ತಿಯೂ ಇಂದು ಮೃತಪಟ್ಟಿದ್ದಾರೆ. ಅಂದ್ರೂನ್ ಕಿಲ್ಲಾ ಅಬ್ದುಲ್ ಕರೀಂ (50) ಮೃತಪಟ್ಟಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು