ರಾಯಚೂರು ;ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲಬುರ್ಗಿ ವಿಭಾಗೀಯ ಸಹ ನಿರ್ದೇಶಕರು ನೀಡದ ವರದಿಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ ಅವರ ವಿರುದ್ಧ ಅನೇಕ ದೂರುಗಳು ಸ್ವೀಕರಿಸಿದ್ದರ ಹಿನ್ನೆಲೆಯಲ್ಲಿ ಸದರಿ ಅಧಿಕಾರಿ ಸಾಕ್ಷ ನಾಶ ಪಡಿಸುವ ಹಿನ್ನೆಲೆಯಲ್ಲಿ ಇಲಾಖೆ ಬಾಕಿ ಇರಿಸಿ ಡಾ.ರಾಮಕೃಷ್ಣ ಅವರನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಲಾಗಿದೆ.ಇದನ್ನಾಧರಿಸಿ ತಕ್ಷಣಕ್ಕೆ ಜಾರಿಗೆ ಬರುವಂತೆ ಡಾ.ರಾಮಕೃಷ್ಣ ಅವರನ್ನು ಅಮಾನತುಗೊಳಿಸಲಾಗಿದೆ . ಜಿಲ್ಲಾ ಆರೋಗ್ಯ ಅಧಿಕಾರಿ ಸ್ಥಾನಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ ನಾಗರಾಜ್ ಅವರಿಗೆ ಪ್ರಭಾರ ನೀಡಲಾಗಿದೆ.