ರಾಯಚೂರು : ಕರ್ನಾಟಕದಲ್ಲೇ ಬಿಸಿಲಿನಲ್ಲಿ ರಾಯಚೂರು ಮೊದಲ ಸ್ಥಾನ ಪಡೆದಿದೆ.ರಾಯಚೂರು ಜಿಲ್ಲೆಯಲ್ಲಿ 40 ವರ್ಷಗಳಲ್ಲೇ ಅತೀ ಹೆಚ್ಚು ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಬಿಸಿಲಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ನಿತ್ಯ 40 ರಿಂದ 43 ಡಿಗ್ರಿ ಸೆಲ್ಸಿಯಸ್ ತಾಪಾಮಾನ ದಾಖಲಾಗುತ್ತಿದೆ. ಬಿಸಿಲಿಗೆ ಜಿಲ್ಲೆಯ ಜನರು ತತ್ತರಿಸಿದ್ದಾರೆ.
ಕಲಬುರಗಿ ಸೇರಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚಾಗಿದ್ದು, ಏಪ್ರಿಲ್ ಮೊದಲ ವಾರದಲ್ಲೇ ತಾಪಮಾನ 42 ಡಿಗ್ರಿ ದಾಖಲಾಗಿದೆ, ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಬಿಸಿಲು ದಾಖಲಾಗುತ್ತಿದೆ. ಈ ತಿಂಗಳ ಅಂತ್ಯ ಹಾಗೂ ಮುಂದಿನ ಮೇ ತಿಂಗಳಲ್ಲಿ ಮತ್ತಷ್ಟು ತಾಪ ಏರಿಕೆಯಾಗಲಿದೆ ಎನ್ನಲಾಗಿದೆ.