News Karnataka Kannada
Tuesday, May 07 2024
ರಾಯಚೂರು

ರಾಯಚೂರು: ಅಂತ್ಯಕ್ರಿಯೆ ವೇಳೆ ಜೀವಂತವಾದ ನವಜಾತ ಶಿಶು

Gang arrested for selling newborns to customers
Photo Credit :

ರಾಯಚೂರು: ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ರಾಯಚೂರು ಜಿಲ್ಲೆಯ ತುರುವಿಹಾಳ ಗ್ರಾಮದಲ್ಲಿ ನಡೆದಿದೆ.

ಮೇ 10 ರಂದು ತುರುವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಮತ್ತು ಅಮರಮ್ಮ ದಂಪತಿಗೆ ಹೆಣ್ಣು ಮಗುವಾಗಿತ್ತು. ಆದರೆ ಮಗುವಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇತ್ತು. ಹೀಗಾಗಿ ಮಗುವನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಪೋಷಕರಿಗೆ ಸೂಚಿಸಿದ್ದಾರೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಪೋಷಕರು ಅದೇ ದಿನ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಖಾಸಗಿ ಆಸ್ಪತ್ರೆಯ ವೈದ್ಯರು ಮಗುವನ್ನು ದಾಖಲಿಸಿಕೊಂಡು ಮೂರ್ನಾಲ್ಕು ದಿನ ಚಿಕಿತ್ಸೆ ನೀಡಿದ್ದಾರೆ. ಇಲ್ಲಿ ಚಿಕಿತ್ಸೆಗಾಗಿ ದಿನಕ್ಕೆ 10,000 ದಿಂದ 12,000 ರೂ. ಹಣ ತೆಗೆದುಕೊಂಡಿದ್ದಾರೆ. ಆದರೂ, ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದರು.

ಮಗು ಮೃತಪಟ್ಟಿರುವ ವಿಷಯ ತಿಳಿದ ಪೋಷಕರು ತುರುವಿಹಾಳ ಗ್ರಾಮಕ್ಕೆ ಮೇ 14ರಂದು ಕರೆದೊಯ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿತ್ತು. ಇದೇ ವೇಳೆ ಸ್ಮಶಾನದಲ್ಲಿ ಮಗು ಉಸಿರಾಡುತ್ತಿರುವುದನ್ನು ಗಮನಿಸಿದ ಸಂಬಂಧಿಕರೊಬ್ಬರು ಕೂಡಲೇ ಸಿಂಧನೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದೀಗ ಮಗು ಚಿಕಿತ್ಸೆ ಪಡೆಯುತ್ತಿದೆ.

ಇದೀಗ ಪೋಷಕರು ನವಜಾತ ಶಿಶು ಸಾವನ್ನಪ್ಪಿದೆ ಎಂದು ಘೋಷಿಸಿದ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಪೋಷಕರು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು