ರಾಯಚೂರು: ಆಟೋ ಪಲ್ಟಿಯಾಗಿ ಮಂತ್ರಾಲಯದ ಗುರುರಾಘವೇಂದ್ರರ ದರ್ಶನ ಪಡೆಯೋದಕ್ಕೆ ತೆರಳುತ್ತಿದ್ದಂತ , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ.
ರೈಲ್ವೆ ನಿಲ್ದಾಣದಿಂದ ದೇವಸ್ಥಾನಕ್ಕೆ ಆಟೋದಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ದೊಡ್ಡಬಳ್ಳಾಪುರದ ಮೂಲಕ ರಾಘವೇಂದ್ರ ಹಾಗೂ ಹುಬ್ಬಳ್ಳಿಯ ಅಭಿಷೇಕ್ ಎನ್ನುವರು ಬೆಂಗಳೂರಿನಿಂದ ರೈಲಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು.
ಆಟೋ ಪಲ್ಟಿಯಾದ ಪರಿಣಾಮದಿಂದ ರಾಘವೇಂದ್ರ ಹಾಗೂ ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಇದೇ ಆಟೋದಲ್ಲಿದ್ದಂತ ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.