News Karnataka Kannada
Tuesday, April 30 2024
ರಾಯಚೂರು

ವಿಚಾರಣೆ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಮುಂದಾದ ಸರ್ಕಾರಿ ನೌಕರ

Death Body 08082021
Photo Credit :

ರಾಯಚೂರು : ನಾಪತ್ತೆಯಾಗಿದ್ದ  ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಕಾಶಬಾಬು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಹಲವು ಸಂಶಯಕ್ಕೆ ಕಾರಣವಾಗಿದೆ.

ಆಗಸ್ಟ್ 23 ರಂದು ಪ್ರಕಾಶಬಾಬು ಕಚೇರಿಯಿಂದ ನಾಪತ್ತೆಯಾಗಿದ್ದರು. ಇದರಿಂದಾಗಿ ಆತಂಕಗೊಂಡಿದ್ದ ಮನೆಯವರು ನಗರದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕ ಪರಿಶೋಧನೆ ಹಿನ್ನೆಲೆಯಲ್ಲಿ ಪ್ರಕಾಶ ಬಾಬು ತಲೆಮರಿಸಿಕೊಂಡಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ಕಾಣೆಯಾಗುವ ಮುನ್ನ ಪ್ರಕಾಶಬಾಬು ಎಸಿ ಕಚೇರಿಯ ಟೇಬಲ್‌ ಮೇಲೆ ವಾಹದ ಕೀಲಿ ಹಾಗೂ ಒಂದು ಪತ್ರವನ್ನು ಸಹ ಬರೆದಿಟ್ಟು ಹೋಗಿದ್ದರು. ಅದರಲ್ಲಿ ವಕೀಲರೊಬ್ಬರ ಹೆಸರನ್ನು ಅವರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಬ್ಬಂದಿ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್‌ ಇಲಾಖೆಯಿಂದ ಎರಡು ತಂಡಗಳನ್ನು ರಚಿಸಿ ನಾಪತ್ತೆಯಾಗಿದ್ದ ಪ್ರಕಾಶಬಾಬು ಪತ್ತೆಕಾರ್ಯವನ್ನು ನಡೆಸಿತ್ತು. ಮೂರ್ನಾಲ್ಕು ದಿನಗಳ ಹಿಂದೆ ಗೋವಾದಲ್ಲಿ ಪ್ರಕಾಶಬಾಬು ಜಾಡನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಇಷ್ಟರಲ್ಲಿಯೇ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ವ್ಯಾಪ್ತಿಗೆ ಬರುವ ಖಾಸಗಿ ಹೋಟೆಲ್‌ನಲ್ಲಿ ಪ್ರಕಾಶ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕಾಶಬಾಬು ಹಲವಾರು ಅಕ್ರಮ, ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೇ ಲೆಕ್ಕಪರಿಶೋಧನಾ ಸಮಿತಿಯಿಂದ ತಪ್ಪಿಸಿಕೊಳ್ಳುವುದಕ್ಕಾಗಿಯೇ ಕಣ್ಮರಿಸಿಕೊಂಡಿದ್ದಾರೆ ಎನ್ನುವ ಚರ್ಚೆಗಳು ಸಾಗಿದ್ದ ಸಮಯದಲ್ಲಿಯೇ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು