News Karnataka Kannada
Sunday, April 28 2024
ರಾಯಚೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ, ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

Teacher 16092021
Photo Credit :

ರಾಯಚೂರು : ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಸಮಸ್ಯೆ ಬಗೆಹರಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಸಿಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಕೈಗೆ ಕಪ್ಪುಪಟ್ಟಿ ಧರಿಸಿ ನಗರದ ಸರ್ಕಾರಿ ನೌಕರರ ಭವನದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯವರೆಗೂ ಕಪ್ಪು ಪಟ್ಟಿ ಧರಿಸಿ ಡಿವೈಪಿಸಿ ಸುಜಾತಾ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಕೃಪಾಂಕ ಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಸೆಳೆಯಲು ಅಕ್ಟೋಬರ್ 4ರಿಂದ ತರಗತಿ ಬಹಿಷ್ಕಾರ ಮಾಡಿದ್ದು ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಮಕ್ಕಳಿಗೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ನವೆಂಬರ್ 11ರಿಂದ 18ರವರೆಗೆ ಸ್ಯಾಟ್ಸ್(ಎಸ್‌ಎಟಿಎಸ್) ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಸರ್ಕಾರಕ್ಕೆ ಅಸಹಕಾರ ನೀಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ, ಸುರೇಶ ಕುರ್ಡಿ, ಸುಧಾ ಬಿರಾದಾರ್, ಹನುಮಂತಪ್ಪ, ರಂಗನಾಥ, ಉಮಾದೇವಿ, ತನುಜಾ ಸೇರಿದಂತೆ ಶಿಕ್ಷಕರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು