ರಾಯಚೂರು: ಪ್ರೌಢ ಶಾಲಾ ವಿದ್ಯಾರ್ಥಿಗಳು ಡ್ರಾಗರ್, ಚಾಕು, ಹಕ್ಕಿಗೆ ಹೊಡೆಯೋ ಗನ್ ಮತ್ತು ಇತರೆ ಟೂಲ್ಸ್ ಹಿಡಿದುಕೊಂಡು ಹೊಡೆದುಕೊಂಡಿದ್ದಾರೆ. ಈ ಘಟನೆ ನಗರದ ಜ್ಯೋತಿ ಕಾಲೋನಿಯಲ್ಲಿ ನಡೆದಿದ್ದು, ಶಿಕ್ಷಕರು ಬೆಚ್ಚಿಬಿದ್ದಿದ್ದಾರೆ.
ಕ್ಷುಲಕ್ಕೆ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಓರ್ವ ವಿದ್ಯಾರ್ಥಿ ಕೈ ಬೆರಳಿಗೆ ಗಾಯವಾಗಿವೆ. ಹೊರಗಡೆಯ ಹುಡುಗರನ್ನು ಸಹ ಕರೆಯಿಸಿ ವಿದ್ಯಾರ್ಥಿಗಳು ಅಸ್ತ್ರಗಳ ಬಳಕೆಗೆ ಮುಂದಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆಗೆ ಸಂಬಂಧಿಸಿ 7ನೇ ತರಗತಿಯ ಒಬ್ಬ ವಿದ್ಯಾರ್ಥಿಯನ್ನು ಠಾಣೆಗೆ ಕರೆಸಿದ್ದಾರೆ ಎನ್ನಲಾಗಿದೆ. ಆದರೆ ಬಾಲಾಪರಾಧ ಪ್ರಕರಣವಾಗಿರುವುದರಿಂದ ಮುಂದಿನ ಕ್ರಮದ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ.