ರಾಯಚೂರು

ಐತಿಹಾಸಿಕವಾಗಲಿದೆ ಲಿಂಗಸಗೂರಿನ ದಸರಾ ಮಹೋತ್ಸವ

ಬಾಳೆಹೊನ್ನೂರು: ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ಅ.೧೫ರಿಂದ ೨೪ರವರೆಗೆ ನಡೆಯುವ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಮಹೋತ್ಸವ ಐತಿಹಾಸಿಕವಾಗಿರಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಲಿಂಗಸಗೂರಿನಲ್ಲಿ ಅ.೧೫ರಿಂದ ನಡೆಯಲಿರುವ ೩೨ನೇ ವರ್ಷದ ಶರನ್ನವರಾತ್ರಿದಸರಾ ಮಹೋತ್ಸವಕ್ಕೆ ತೆರಳುವ ಮುನ್ನ ರಂಭಾಪುರಿ ಪೀಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ ಲಿಂಗಸಗೂರಿನಲ್ಲಿ ಆಯೋಜಿಸಲಾಗಿದೆ. ಹಲವು ವರ್ಷಗಳಿಂದ ಅಲ್ಲಿ ದಸರಾ ನಡೆಸಬೇಕು ಎಂಬ ಆಶಯವಿತ್ತು. ಇದೀಗ ಮಹೋತ್ಸವ ನಡೆಸುವ ಶುಭ ಸಮಯ ಒದಗಿ ಬಂದಿದೆ ಎಂದರು.

ಧರ್ಮ ಸಮ್ಮೇಳನಕ್ಕೆ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್, ದೇವರಭೂಪುರ ಬೃಹನ್ಮಠದ ಗಜದಂಡ ಶಿವಾಚಾರ್ಯರ ನೇತೃತ್ವದಲ್ಲಿ ಸಿದ್ಧತೆ ಪೂರ್ಣಗೊಂಡಿವೆ. ದಸರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು, ಧರ್ಮಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಗೊಳ್ಳಲು ಎಲ್ಲ ಧರ್ಮಗಳೂ ಶ್ರಮಿಸುತ್ತ ಬಂದಿದ್ದು, ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಧ್ಯೇಯ ಹೊಂದಿ ಸಾತ್ವಿಕ ಸಮಾಜ ಕಟ್ಟಿ ಬೆಳೆಸಲು ರಂಭಾಪುರಿ ಪೀಠ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಎಲ್ಲೆಡೆ ಶಾಂತಿ, ಸಾಮರಸ್ಯ, ಸದ್ಭಾವನೆಗಳು ಬೆಳೆಯಬೇಕಿದೆ. ಎಲ್ಲ ಧರ್ಮಗಳಲ್ಲಿ ಪರಮ ಸತ್ಯ, ಶಾಂತಿ ಅಡಗಿದ್ದು, ದೇವನೊಬ್ಬ ನಾಮ ಹಲವು ಎಂಬ ಅರ್ಥ ಅರಿತು ಬಾಳಿದಾಗ ಎಲ್ಲೆಡೆ ಶಾಂತಿ ಸಮೃದ್ಧಿ ನೆಲೆಗೊಳ್ಳಲು ಸಾಧ್ಯ ಎಂದರು.

ಧರ್ಮ, ಜಾತಿ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿ ಸಂಘರ್ಷಗಳು ನಡೆಯಬಾರದು. ನಾವೆಲ್ಲ ಭಾರತ ಮಾತೆಯ ಮಕ್ಕಳು ಎಂಬ ವಿಶಾಲ ಭಾವನೆಯಿಂದ ಬಾಳಬೇಕಾಗಿದೆ. ಸ್ವ ಧರ್ಮನಿಷ್ಠೆ ಮತ್ತು ಪರಧರ್ಮದ ಸಹಿಷ್ಣುತೆ ಎಲ್ಲರ ಉಸಿರಾಗಿರಬೇಕು. ಸಚ್ಚಾರಿತ್ರ್ಯ ಮತ್ತು ಸದ್ವಿಚಾರಗಳನ್ನು ಯುವಜನಾಂಗಕ್ಕೆ ಕೊಡುವ ಅಗತ್ಯವಿದೆ ಎಂದು ನುಡಿದರು.

ಭಾರತೀಯ ಉತ್ಕೃಷ್ಟ ಸಂಸ್ಕೃತಿ, ಆದರ್ಶಗಳನ್ನು ಮನವರಿಕೆ ಮಾಡುವ ಕೊಡುವ ಅವಶ್ಯಕತೆಯಿದ್ದು, ಕಲೆ, ಸಾಹಿತ್ಯ, ಸಂಗೀತ, ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಕ್ರಮಗಳನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ಲಿಂಗಸಗೂರಿನಲ್ಲಿ ನಡೆಯಲಿರುವ ದಸರಾ ನಾಡಹಬ್ಬದಲ್ಲಿ ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಎಲ್ಲ ಜನ ಸಮುದಾಯದ ಜನರು ಪಾಲ್ಗೊಳ್ಳುವರೆಂಬ ವಿಶ್ವಾಸ ತಮಗಿದ್ದು, ೩೧ ವರ್ಷಗಳ ದಸರಾ ಮಹೋತ್ಸವಕ್ಕಿಂತ ವಿಭಿನ್ನವಾಗಿ ಲಿಂಗಸಗೂರಿನಲ್ಲಿ ಕೂಡ ಯಶಸ್ವಿಯಾಗುವುದೆಂಬ ನಿರೀಕ್ಷೆ ಇದೆ ಎಂದರು.

ಬೆಳಗ್ಗೆ ಪೀಠದ ಎಲ್ಲ ದೈವ ಮಂದಿರದಲ್ಲಿ ಜಗದ್ಗುರುಗಳು ವಿಶೇಷ ಅಷ್ಟೋತ್ತರ, ಮಹಾ ಮಂಗಳಾರತಿ ಪೂಜೆ ನೆರವೇರಿಸಿದರು.

ಸ್ಥಳೀಯ ಭಕ್ತರು ರಂಭಾಪುರಿ ಜಗದ್ಗುರುಗಳಿಗೆ ಗೌರವಾರ್ಪಣೆ ಮಾಡಿ ಬೀಳ್ಕೊಟ್ಟರು. ತಾಲೂಕು ಕಸಾಪ ಕಾರ್ಯದರ್ಶಿ ಸತೀಶ್ ಅರಳೀಕೊಪ್ಪ, ಜಿಲ್ಲಾ ಚುಸಾಪ ಅಧ್ಯಕ್ಷ ಯಜ್ಞಪುರುಷ ಭಟ್, ಉದ್ಯಮಿ ಬಾಳಯ್ಯ ಇಂಡಿಮಠ, ಹಾಸ್ಯ ಕಲಾವಿದ ಕೃಷ್ಣ ಭಟ್ ಇತರರಿದ್ದರು.

Sneha Gowda

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

9 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

24 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

44 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago