ರಾಯಚೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕಿರಿಕ್ ಮಾಡಿದ ವ್ಯಕ್ತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ರಾಜೋಳ್ಳಿ ಅನ್ನೋ ಗ್ರಾಮದ ನರಸಿಂಹ ಎಂದು ತಿಳಿದು ಬಂದಿದೆ.
ಏಕಾಏಕಿ ಠಾಣೆಗೆ ಎಂಟ್ರಿ ಕೊಟ್ಟಿದ್ದ ನರಸಿಂಹ ಎಂಬ ನನಗೆ ಹೆಂಡ್ತಿ ಬೇಕು, ಇಲ್ಲದಿದ್ದರೆ ಠಾಣೆ ಬಿಟ್ಟು ಹೋಗಲ್ಲ ಅಂತ ಪಟ್ಟು ಹಿಡಿದಿದ್ದಾನೆ. ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಪೊಲೀಸರ ಮಾತು ಕೇಳದೇ ಇಂಗ್ಲಿಷ್ನಲ್ಲಿ ಲೈಫ್ ಲಾಂಗ್ ಅಂತೆಲ್ಲಾ ಇಂಗ್ಲಿಷ್ನಲ್ಲಿ ಡೈಲಾಗ್ ಹೊಡೆದಿದ್ದಾನೆ. ಬಳಿಕ ನಾನು ಸಾಯೋ ವರೆಗೂ ಜಾಗ ಬಿಟ್ಟು ಕದಲಲ್ಲ ಅಂತ ಪಟ್ಟು ಹಿಡಿದಿದ್ದಾನೆ.
ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ಊಟದ ಹೊತ್ತಲ್ಲಿ ಎಂಟ್ರಿ ಕೊಟ್ಟಿದ್ದ ಆತನ ಕಿರಿಕ್ಗೆ ಖಾಕಿ ಪಡೆ ಏನ್ ಮಾಡಬೇಕು ಎಂದು ತಿಳಿಯದೇ ತಲೆ ಮೇಲೆ ಕೈ ಹೊತ್ತು ಕೂತಿದ್ದರು. ಮದಿರೆಯ ಮತ್ತಲ್ಲಿ ಹಾವಳಿ ಇಟ್ಟಿದ್ದವನ ಡಿಮ್ಯಾಂಡ್ಗೆ ಪೊಲೀಸರಿಗೆ ದಿಕ್ಕೆ ತೋಚದಂತಾಗಿತ್ತು.
ಪೊಲೀಸರ ತಲೆ ಬಿಸಿ ಹೆಚ್ಚಿಸಿದ್ದ ಈತ ತನಗೆ ಇಬ್ಬರು ಹೆಂಡತಿಯರಿದ್ದಾರೆ. ಅವರು ಬಿಟ್ಟು ಹೋಗಿದ್ದಾರೆ. ನನಗೆ ನನ್ನ ಹೆಂಡತಿಯರು ಬೇಕು. ನನ್ನ ಹೆಂಡ್ತಿರನ್ನ ನನ್ನ ಜೊತೆ ಕಳಿಸಿಕೊಡಿ ಅಂತ ಪಟ್ಟು ಹಿಡಿದಿದ್ದಾನೆ. ಒಂದು ವೇಳೆ ನನ್ನ ಹೆಂಡ್ತಿರು ನನ್ನ ಜೊತೆ ಬಾರದೇ ಇದ್ದರೆ ನಾನೂ ಇಲ್ಲೇ ಕುಳಿತುಕೊಳ್ಳುತ್ತೇನೆ ಅಂತ ತೆಲುಗಿನಲ್ಲಿ ಹೇಳಿದ್ದಾನೆ.
ಇಷ್ಟೆಲ್ಲಾ ಆದ ಬಳಿಕ ಮತ್ತೆ ಆತ ಲುಂಗಿ ಬಿಚ್ಚುತ್ತಾ ನ್ಯುಸೆನ್ಸ್ ಕ್ರಿಯೆಟ್ ಮಾಡತೊಡಗಿದ್ದ. ಕೊನೆಗೆ ಪೊಲೀಸರು ಎಚ್ಚರಿಕೆ ನೀಡಿ ಠಾಣೆಯಿಂದ ಹೊರ ಕಳುಹಿಸಿದ್ದಾರೆ.