ರಾಯಚೂರು: ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದೆ. ಜಿಲ್ಲೆಯ ಸೆಲ್ಸಿಯಸ್ ತಲುಪಿದ್ದು, ಪ್ರಖರ ಬಿಸಿಲು ಹಾಗೂ ನಿರ್ಜಲೀಕರಣದಿಂದ ನಾಲ್ವರು ಮೃತಪಟ್ಟಿದ್ದಾರೆ.
ಹಳ್ಳಕ್ಕೆ ಬಟ್ಟೆ ತೊಳೆಯಲು ಹೋದಾಗ ಸಂಜೆ ಸ್ಥಳದಲ್ಲೇ ವೀರೇಶ ಹನುಮಂತಪ್ಪ ಮಡಿವಾಳ(50) ಮೃತಪಟ್ಟಿದ್ದಾರೆ. ಗಂಗಮ್ಮ ದೇವದಾಸಿ(60) ಹಾಗೂ ಅಂಗವಿಕಲ ಪ್ರದೀಪ ತಮ್ಮಣ್ಣ ಪೂಜಾರಿ(15) ಹಾಸಿಗೆಯಲ್ಲೆ ಮೃತಪಟ್ಟಿದ್ದಾರೆ. ಮತ್ತು ದುರ್ಗಮ್ಮ ಹನುಮಂತಪ್ಪ ಉಪ್ಪಾರ್(60) ನಿಧನರಾಗಿದ್ದಾರೆ. ಆದರೆ ಇವರಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಆರೋಗ್ಯ ಅಧಿಕಾರಿ ಡಾ. ಸುರೇಶ ಬಾಬು ತಿಳಿಸಿದ್ದಾರೆ.
ಇನ್ನೊಂದೆಡೆ ಶಕ್ತಿನಗರದ ವೈಟಿಪಿಎಸ್ ಮುಂಭಾಗ ರಾಯಚೂರು-ಹೈದರಾಬಾದ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ರಸ್ತೆ ಬದಿಗೆ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾನೆ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂಧಿಸಿದ್ದಾರೆ.