ಸಿಂಧನೂರು: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಹೈದರಾಬಾದ್ನ ಅಮರ್ದೀಪ ಸಕ್ಸೆನಾ (35), ಅವರ ಪತ್ನಿ ಪೂರ್ಣಿಮಾ (30), ಮಕ್ಕಳಾದ ಜತೀನ್ (12) ಮತ್ತು ಮಾಯೀನ್ (7) ಮೃತರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಸಿಪಿಐ ಉಮೇಶ ಕಾಂಬ್ಳೆ, ಪಿಎಸ್ಐ ಯರಿಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಲಾರಿಯೊಳಗೆ ಸಿಕ್ಕಿ ಹಾಕಿಕೊಂಡಿದ್ದ ಮೃತ ದೇಹಗಳು ಹಾಗೂ ಕಾರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರಕ್ಕೆ ತೆಗೆಯಲಾಯಿತು. ಬಳಿಕ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.