ಸಿಂಧನೂರು: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಹೈದರಾಬಾದ್ನ ಅಮರ್ದೀಪ ಸಕ್ಸೆನಾ (35), ಅವರ ಪತ್ನಿ ಪೂರ್ಣಿಮಾ (30), ಮಕ್ಕಳಾದ ಜತೀನ್ (12) ಮತ್ತು ಮಾಯೀನ್ (7) ಮೃತರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಸಿಪಿಐ ಉಮೇಶ ಕಾಂಬ್ಳೆ, ಪಿಎಸ್ಐ ಯರಿಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಲಾರಿಯೊಳಗೆ ಸಿಕ್ಕಿ ಹಾಕಿಕೊಂಡಿದ್ದ ಮೃತ ದೇಹಗಳು ಹಾಗೂ ಕಾರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರಕ್ಕೆ ತೆಗೆಯಲಾಯಿತು. ಬಳಿಕ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…