ರಾಯಚೂರು: ಜಿಲ್ಲೆಯ ಸಿಂಧನೂರು ಬಾಲಯ್ಯ ಕ್ಯಾಂಪ್ ಬಳಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರು ಮಧ್ಯಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ರಸ್ತೆ ಅಪಘಾತದಿಂದ ಕೆಲ ಕಾಲ ಬಾಲಯ್ಯ ಕ್ಯಾಂಪ್ ಬಳಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಎರಡು ಜೆಸಿಬಿ ಮೂಲಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಲಾಗಿದೆ.
ಸ್ಥಳಕ್ಕೆ ಸಿಂಧನೂರು ಠಾಣೆ ಪೊಲೀಸರು ದೌಡಾಯಿಸಿದ್ದು, ಮೃತದೇಹ ಸಿಂಧನೂರು ಆಸ್ಪತ್ರೆಗೆ ರವಾನಿಸಲಾಗಿದೆ.