ರಾಯಚೂರು: ಸರ್ಕಾರಿ ಅಧಿಕಾರಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಪಬ್ಲಿಕ್ ಸ್ವಿಮ್ಮಿಂಗ್ ಪೂಲ್ ಬಳಿ ನಡೆದಿದೆ.
ರಾಯಚೂರಿನ ಉಪವಿಭಾಗ (ಎಸಿ) ಕಚೇರಿಯ ಅಧಿಕಾರಿ ವಸೀಮ್ (45) ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ.
ಆ್ಯಸಿಡ್ ಕುಡಿದ ಅಧಿಕಾರಿಯನ್ನು ನೋಡಿದ ಅಲ್ಲಿದ್ದವರು ತಕ್ಷಣ ಅವರನ್ನು ನಗರದ ಸಂಕಲ್ಪ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಿದ್ದರಿಂದ ಅಧಿಕಾರಿಯನ್ನು ಹೈದರಾಬಾದ್ನಲ್ಲಿನ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಅಧಿಕಾರಿ ಆ್ಯಸಿಡ್ ಏಕೆ ಸೇವನೆ ಮಾಡಿದರು ಎಂಬುದರ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821