ರಾಯಚೂರು: ತಿಂಡಿ ಕೊಡಲು ಲೇಟ್ ಮಾಡಿದಕ್ಕೆ ಗ್ರಾಹಕನೋರ್ವ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾ|ರಾಜೋಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮಾ ನಾಯಕ್ ಎಂಬಾತ ಹೋಟೆಲ್ನಲ್ಲಿ ತಿಂಡಿ ತಿನ್ನಲು ಬಂದಿದ್ದು ಒಗ್ಗರಣೆ ಆರ್ಡರ್ ಮಾಡಿದ್ದ.
ಈ ವೇಳೆ ಒಗ್ಗರಣೆ ಕೊಡುವಲ್ಲಿ ತಡವಾಗಿದಕ್ಕೆ ಹೋಟೆಲ್ ಮಾಲೀಕ ರಂಗಯ್ಯ ಶೆಟ್ಟಿ ಎಂಬುವವರ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.