ರಾಯಚೂರು: ಪೋಷಕರು ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
24 ವರ್ಷದ ಆದರ್ಶ ಆತ್ಮಹತ್ಯೆಗೆ ಶರಣಾದ ಯುವಕ.
ನಿತ್ಯ ಮದ್ಯಪಾನ ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು. ಇದೇ ವಿಚಾರಕ್ಕೆ ಬೈದು ಬುದ್ದಿವಾದ ಹೇಳಿದ್ದರು.
ಬುದ್ದಿವಾದವನ್ನೇ ಅವಮಾನ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯ ಬಾತ್ ರೂಮ್ನಲ್ಲಿದ್ದ ಕಬ್ಬಿಣದ ಪೈಪ್ಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಆದರ್ಶ ಮದ್ಯವ್ಯಸನಿಯಾಗಿದ್ದ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821