News Karnataka Kannada
Friday, May 03 2024
ರಾಯಚೂರು

ರಾಯಚೂರಿನಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸುವಂತೆ ಮಂತ್ರಾಲಯ ಶ್ರೀ ಒತ್ತಾಯ

Mantralaya Sri demands setting up of Institute of Medical Sciences in Raichur
Photo Credit : News Kannada

ರಾಯಚೂರು: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಸ್ಥಾಪನೆಗೆ ಸಂಬಂಧಿಸಿದಂತೆ ನಮ್ಮ ಸಹನೆ ಪರೀಕ್ಷಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುದೇಂದ್ರ ತೀರ್ಥ ಸ್ವಾಮೀಜಿ ಎಚ್ಚರಿಸಿದ್ದಾರೆ.

ರಾಯಚೂರಿನಲ್ಲಿ 308 ದಿನಗಳಿಂದ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲಾಗಿದೆ.

ರಾಯಚೂರು ಬಂಗಾರದ ನಾಡು. ಎರಡು ನದಿಗಳು ಹರಿಯುವ ಅನ್ನದ ಬಟ್ಟಲು ಎಂದೇ ಹೆಸರಾಗಿದೆ. ಜಿಲ್ಲೆ ಈಗಾಗಲೇ ಐಐಟಿಯನ್ನು ಕಳೆದುಕೊಂಡಿದೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ. ಎಂದು ಎಚ್ಚರಿಸಿದರು.

”ರಾಯಚೂರಿಗೆ ಐಐಟಿ ಮಂಜೂರು ಮಾಡಬೇಕಿತ್ತು. ನಾವು ಕಳೆದುಕೊಂಡೆವು. ಹಸಿದವನಿಗೆ ಊಟ ಹಾಕಬೇಕು. ಹಸಿವಿಲ್ಲದವನಿಗೆ ಕೊಟ್ಟಾಗ ಬೆಲೆ ಇಲ್ಲ . ಪ್ರಧಾನಿ, ಮತ್ತು ಮುಖ್ಯಮಂತ್ರಿ ಪ್ರತಿಭಟನಾಕಾರರ ಬೇಡಿಕೆ ಆಲಿಸಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು