ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇದೇ ಜನವರಿ 12 ರಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಕಬ್ಬಿನ ಹಾಲಿನ ಅಂಗಡಿ ಬಳಿ ಕಾರು ನಿಲ್ಲಿಸಿ ಅಂಗಡಿಯಲ್ಲಿ ಖುದ್ದು ತಾವೇ ಮಷಿನ್ಗೆ ಕಬ್ಬು ಹಾಕಿ, ಹಾಲು ತೆಗೆದಿದ್ದಾರೆ.
ರಾಯಚೂರು-ಮಂತ್ರಾಲಯ ಮಾರ್ಗ ಮಧ್ಯೆ ಕಬ್ಬಿನ ಹಾಲಿನ ಅಂಗಡಿ ಬಳಿ ಪ್ರಹ್ಲಾದ್ ಜೋಶಿ ಅವರು ಕಬ್ಬಿನಿಂದ ಹಾಲು ತೆಗೆಯುವ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೇ ಖುದ್ದು ಪ್ರಹ್ಲಾದ್ ಜೋಶಿ ಅವರೇ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ವಿದೇಶಿ ಪಾನೀಯಗಳ ಬದಲು ನಮ್ಮ ದೇಶದ ಸ್ವಾದ ಕಬ್ಬಿನ ಹಾಲು ಬಲು ಚಂದ” ಎಂದು ಕ್ಯಾಪ್ಶನ್ ಬೆರೆದಿದ್ದಾರೆ.