ರಾಯಚೂರು: ಇಲ್ಲಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್ಟಿಪಿಎಸ್ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗ ಎಲ್ಲಾ ಕಡೆ ನೀರಿಗಾಗಿ ಪರಿತಪಿಸುವಂತಾಗಿದ್ದು, ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ನ ಸಮಸ್ಯೆಯನ್ನು ಜನರು ಎದುರಿಸಬೇಕಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್ಟಿಪಿಎಸ್ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ.
ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.