ರಾಯಚೂರು: ಹಾಸ್ಟೆಲ್ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸಮಾಜ ಕಲ್ಯಾಣ ಹಾಸ್ಟೆಲ್ ನಲ್ಲಿ ನಡೆದಿದೆ.
ಹಾಸ್ಟೆಲ್ನಲ್ಲಿ ಪಲಾವ್ ತಿಂದಿರುವ ವಿದ್ಯಾರ್ಥಿನಿಯರು ತೀವ್ರ ಹೊಟ್ಟೆ ನೋವು, ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿನಿಯರ ನರಳಾಟ ಕಂಡು ಅಡುಗೆಯವರು ತಾಲೂಕಿನ ಆಸ್ಪತ್ರೆಗೆ ಸೇರಿಸಿದ್ದಾರೆ.
ಆಹಾರ ಸೇವಿಸಿ ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರೂ ಹಾಸ್ಟೆಲ್ ವಾರ್ಡನ್ ಪಾರ್ವತಿ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಬರಲೇ ಇಲ್ಲ. ವಾರ್ಡನ್ ಬೇಜವಾಬ್ದಾರಿ, ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ವಿದ್ಯಾರ್ಥಿನಿಯರು ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.