News Karnataka Kannada
Tuesday, May 07 2024
ರಾಯಚೂರು

ರಾಯಚೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ, ಪ್ರಾಂಶುಪಾಲರ ಬಂಧನ

Industrialist's suicide case: Main accused arrested
Photo Credit : IANS

ರಾಯಚೂರು: 17 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ.

ಸರ್ ಎಂ.ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರಮೇಶ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಕೊಲೆ ಮಾಡಿ ನಂತರ ಹಾಸ್ಟೆಲ್ ನಲ್ಲಿ ನೇಣು ಹಾಕಿದ್ದಾನೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.

ಘಟನೆಯ ನಂತರ ತಲೆಮರೆಸಿಕೊಂಡಿದ್ದ ರಮೇಶ್ ನನ್ನು ಬಿಜಾಪುರದಲ್ಲಿ ಬಂಧಿಸಲಾಗಿದೆ.

ವಿಸಿಬಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಪ್ರಥಮ ಪಿಯು ವಿದ್ಯಾರ್ಥಿನಿ ಫೆಬ್ರವರಿ 10 ರಂದು ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಮಾಹಿತಿ ಪಡೆದ ನಂತರ ಸಂತ್ರಸ್ತೆಯ ಪೋಷಕರು ಹಾಸ್ಟೆಲ್ ತಲುಪಿದಾಗ, ರಮೇಶ್ ಪದೇ ಪದೇ ಅವಳನ್ನು ತನ್ನ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆಕೆಯ ಸ್ನೇಹಿತರು ಆರೋಪಿಸಿದ್ದರು.

ನಂತರ ಸಂತ್ರಸ್ತೆಯ ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು