News Karnataka Kannada
Tuesday, April 30 2024
ರಾಯಚೂರು

ರಾಯಚೂರು: ಸರ್ಕಾರಿ ಶಾಲೆಯ ಪರಿಸ್ಥಿತಿ ಕಂಡು ಎಸಿ ಶಾಕ್!

Raichu
Photo Credit : News Kannada

ರಾಯಚೂರು: ತಾಲೂಕಿನ ಲಿಂಗನಖಾನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿದ ರಾಯಚೂರು ಉಪವಿಭಾಗದ ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಅಲ್ಲಿನ ಪರಿಸ್ಥಿತಿ ಕಂಡು ಶಾಕ್ ಆಗಿದ್ದಾರೆ.

ಎರಡನೇ ತರಗತಿ ಮಕ್ಕಳಿಗೆ ಇಂಗ್ಲಿಷ್ ವರ್ಣಮಾಲೆ ಪರಿಚಯವೇ ಇಲ್ಲದ್ದನ್ನು ತಿಳಿದು ದಿಢೀರ್ ಭೇಟಿ ವೇಳೆ ಎಸಿ ಗರಂ ಆಗಿದ್ದಾರೆ. ಮಕ್ಕಳಿಗೆ ಎಬಿಸಿಡಿ ಓದಲು ಬರುವುದಿಲ್ಲ ಏನ್ ಕಲಿಸುತ್ತಿದ್ದಿರಿ ಎಂದು ಶಿಕ್ಷಕಿ ಹಾಗೂ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಸ್ಯೆಗಳನ್ನೇ ಹೇಳುತ್ತಿರುವುದನ್ನು ಬಿಟ್ಟು ಮಕ್ಕಳಿಗೆ ಕಲಿಸುವ ಕಡೆಯೂ ಗಮನಹರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ (Covid-19) ಕಾರಣಕ್ಕೆ ಎರಡು ವರ್ಷದಿಂದ ಮಕ್ಕಳು ಓದಿನಲ್ಲಿ ಹಿಂದೆ ಬಿದ್ದಿದ್ದಾರೆ ಅನ್ನೋ ಶಿಕ್ಷಕಿಯ ಸಮಜಾಯಿಷಿಗೆ ಅಧಿಕಾರಿ ಗರಂ ಆದರು. ನಾನೇ ಶಿಕ್ಷಕನಾಗಿ ಬರಲೇ ಎರಡೇ ದಿನದಲ್ಲಿ ಎಬಿಸಿಡಿ ಕಲಿಸುತ್ತೇನೆ. ಒಂದು ವಾರದೊಳಗೆ ಮಕ್ಕಳಿಗೆ ಎಬಿಸಿಡಿ ಕಲಿಸಬೇಕು. ಮಕ್ಕಳು ಪಟಪಟನೆ ಎಬಿಸಿಡಿ ಹೇಳುವುದನ್ನು ವೀಡಿಯೋ ಮಾಡಿ ಕಳುಹಿಸಿ ಎಂದು ತಾಕೀತು ಮಾಡಿದರು. ಶಾಲೆಯ ಶಿಕ್ಷಕರ ಕೊರತೆ ಬಗ್ಗೆ ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರೆಮಾಡಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವಂತೆ ಎಸಿ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು