ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರ್ಲಕುಂಟಿ ಗ್ರಾಮದ ಬಳಿ ಡಿ.23ರ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಲಿಂಗಸುಗೂರು ತಾಲೂಕಿನ ಯರಗಂಟಿ ಗ್ರಾಮದ ನಿವಾಸಿ ಶಿವಜ್ಞಾನಪ್ಪ ತಳವಾರ (38) ಮೃತಪಟ್ಟವರು. ಅಪಘಾತದಲ್ಲಿ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ.
ಅವರು ಮಸ್ಕಿಯಿಂದ ಲಿಂಗಸುಗೂರಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ ಸವಾರನು ಜಾರಿ ಕೆಳಗೆ ಬಿದ್ದ ನಂತರ, ಲಾರಿ ಹಿಂಬದಿ ಸವಾರನಿಗೆ ಡಿಕ್ಕಿ ಹೊಡೆದಿದೆ. ಲಾರಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸ್ಥಳಕ್ಕೆ ಪಿಎಸ್ ಐ ಸಿದ್ಧರಾಮ ಬಿದರಾನಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.