ರಾಯಚೂರು: ಮಕ್ಕಳು, ಯುವಕರನ್ನು ಟಾರ್ಗೆಟ್ ಮಾಡಿ ಗಾಂಜಾ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಒಟ್ಟು 2.66 ಕೆ.ಜಿ ತೂಕದ ಗಾಂಜಾ ಮಿಶ್ರಿತ ಚಾಕೊಲೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಚಯ್ಯಸ್ವಾಮಿ, ಅಮರಯ್ಯ ಸ್ವಾಮಿ ಗಾಂಜಾ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಗಳು. ರಾಯಚೂರು ನಗರದ LBS ನಗರ, ಚಂದ್ರಬಂಡ್ ರಸ್ತೆ ಸೇರಿದಂತೆ ಇತರೆ ಏರಿಯಾಗಳಲ್ಲಿ ಆರೋಪಿಗಳು ಗಾಂಜಾ ಚಾಕೊಲೇಟ್ಗಳನ್ನು ಮಕ್ಕಳಿಗೆ ಹಾಗೂ ಯುವಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧಿಕಾರಿ ಡಿ.ಸಿ ಲಕ್ಷ್ಮೀ ಅವರ ನೇತೃತ್ವದಲ್ಲಿ ದಾಳಿ ಮಾಡಲಾಯಿತು.
ದಾಳಿ ವೇಳೆ ಒಟ್ಟು 2.66 ಕೆ.ಜಿ ತೂಕದ 482 ಗಾಂಜಾ ಮಿಶ್ರಿತ ಚಾಕೊಲೇಟ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಚಾಕೊಲೇಟ್ಗಳು ಉತ್ತರ ಪ್ರದೇಶದಿಂದ ಪೂರೈಕೆ ಆಗುತ್ತಿದ್ದವು ಎಂದು ಹೇಳಲಾಗಿದೆ.