News Karnataka Kannada
Thursday, May 09 2024
ರಾಯಚೂರು

ರಾಯಚೂರು: ಭಾರತ ಐಕ್ಯತಾ ಯಾತ್ರೆ ನಾಳೆ ಬೆಳಗ್ಗೆ ರಾಜ್ಯದಲ್ಲಿ ಮುಕ್ತಾಯ!

Bharath
Photo Credit : News Kannada

ರಾಯಚೂರು: ಭಾರತ ಐಕ್ಯತಾ ಯಾತ್ರೆ ನಾಳೆ ರಾಜ್ಯದಲ್ಲಿ ಮುಕ್ತಾಯವಾಗಲಿದೆ. ಸೆ.30 ರಿಂದ ಆರಂಭವಾದ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಯಾತ್ರೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದಾರೆ. ಇವರು ಪಕ್ಷವನ್ನು ನೋಡಿಲ್ಲ. ಈ ಎಲ್ಲರೂ ಬದುಕು, ಭವಿಷ್ಯ, ದೇಶದಲ್ಲಿ ಶಾಂತಿ ಮರುಸ್ಥಾಪನೆ, ನಿತ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಈ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಇಂದಿರಾ ಗಾಂಧಿ ಅವರ ಕಾಲದಲ್ಲಿ ಅವರನ್ನು ನೋಡಿ ಖುಷಿ ಪಡಲು ಜನ ಹಳ್ಳಿ, ಹಳ್ಳಿಗಳಿಂದ ಆಗಮಿಸಿದಂತೆ ಇಂದು ರಾಹುಲ್ ಗಾಂಧಿ ಅವರನ್ನು ನೋಡಿ ಶುಭಕೋರಲು ಉತ್ಸುಕರಾಗಿ ಬರುತ್ತಿದ್ದಾರೆ. ಜತೆಗೆ ಅವರ ಆಚಾರ, ವಿಚಾರ, ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಪಕ್ಷದ ರಾಜ್ಯ ಅಧ್ಯಕ್ಷನಾಗಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜಾತಿ, ಧರ್ಮ, ಪಕ್ಷ ಬೇಧ ಮರೆತು ಎಲ್ಲ ವರ್ಗದವರು ಈ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ನಡಿಗೆ ದೇಶಕ್ಕೆ ಒಂದು ಕೊಡುಗೆ ಎಂದು ಅಭಿಪ್ರಾಯಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು