ರಾಯಚೂರು: ತಾಲೂಕಿನ ಸಾಸಲಮರಿ ಕ್ಯಾಂಪ್ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮುದಿಯಪ್ಪ (45) ಮತ್ತು ಹುಲಿಗೆಪ್ಪ (64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಎರಡು ಗಂಟೆ ತಡವಾಗಿ ಬಂದ ಪೊಲೀಸರ ವಿರುದ್ಧ ಸ್ಥಳೀಯರು ಸ್ವಲ್ಪ ಸಮಯದವರೆಗೆ ಪ್ರತಿಭಟಿಸಿದರು.
ರೈಲ್ವೆ ಕೆಲಸಕ್ಕೆ ನಿಯೋಜಿಸಲಾದ ಟಿಪ್ಪರ್ ಅವರ ಮೇಲೆ ಹರಿದ ನಂತರ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳನ್ನು ಕರೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸ್ಥಳಕ್ಕಾಗಮಿಸಿದ ಪಿಎಸ್ಐ ಸೌಮ್ಯಾ ಹಿರೇಮಠ್ ಅವರೊಂದಿಗೆ ವಾಗ್ವಾದ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.