ರಾಯಚೂರು: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಕೆಕೆಆರ್ಟಿಸಿ ಬಸ್ ಮಧ್ಯೆ ರಾತ್ರಿ ಗದ್ದೆಗೆ ಉರುಳಿ ಬಿದ್ದ ಘಟನೆ ದೇವದುರ್ಗ ಹೊರವಲಯದ ಅಂಜಳ ಕ್ರಾಸ್ ಬಳಿ ರಾತ್ರಿ 2 ಗಂಟೆಗೆ ನಡೆದಿದೆ. ಅದೃಷ್ಟವಶಾತ್ ದೊಡ್ಡ ಪ್ರಮಾದವೊಂದು ತಪ್ಪಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರೌಢ ಶಾಲಾ ವಿದ್ಯಾರ್ಥಿಗಳು ಕೆಕೆಆರ್ಟಿಸಿ ಬಸ್ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮಧ್ಯೆ ರಾತ್ರಿ 2 ಗಂಟೆ ಸುಮಾರಿಗೆ ತಾ| ಹೊರವಲಯದ ಅಂಜಳ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಗದ್ದೆಗೆ ಉರುಳಿ ಬಿದ್ದಿದೆ. ಪರಿಣಾಮ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಆದರೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿಲ್ಲ. ಇನ್ನು ಅಪಘಾತ ನಡೆದ ಒಂದು ಗಂಟೆ ಬಳಿಕ ದೇವದುರ್ಗ ಘಟಕದಿಂದ ಮತ್ತೊಂದು ಬಸ್ಗೆ ಮಕ್ಕಳನ್ನು ಹತ್ತಿಸಿಕೊಂಡು ಹೋಗಲಾಗಿದೆ.