News Karnataka Kannada
Friday, May 10 2024
ರಾಯಚೂರು

ಮಂತ್ರಾಲಯದಲ್ಲಿ 108 ಅಡಿ ಎತ್ತರದ ಶ್ರೀರಾಮ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು

amith shah
Photo Credit : News Kannada

ರಾಯಚೂರು: ದೇಶದಲ್ಲಿ ಹಿಂದೂಗಳ ಆರಾಧ್ಯ ದೈವವಾದ ಶ್ರೀರಾಮನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದರ ಬೆನ್ನಲ್ಲಿಯೇ ಶ್ರೀ ಗುರು ರಾಘವೇಂದ್ರನ ಸನ್ನಿಧಿಯಾದ ಮಂತ್ರಾಲಯದಲ್ಲಿ 108 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವರ್ಚುವಲ್ ಮೂಲಕ ಅಡಿಗಲ್ಲು ಹಾಕಿ ಚಾಲನೆ ನೀಡಿದ್ದಾರೆ.

ಮಂತ್ರಾಲಯದಲ್ಲಿ‌ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಇನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು, ವರ್ಚುವಲ್ ಮೂಲಕ ಅಡಿಗಲ್ಲು ಹಾಕಿದರು. ಮಂತ್ರಾಲಯದಲ್ಲಿ ನಿರ್ಮಾಣವಾಗಲಿರುವ 108 ಅಡಿ ಎತ್ತರದ ಶ್ರೀರಾಮನ ಪ್ರತಿಮೆಗೆ ಭೂಮಿ ಪೂಜೆಯನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.

ಇದೇ ವೇಳೆ ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಭೌತಿಕವಾಗಿ ಭೂಮಿ ಪೂಜೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ರಾಜ್ಯದ ಹಲವು ಸಚಿವರುಗಳು ಹಾಗೂ ಗಣ್ಯರು ಭಾಗಿಯಾಗಿದ್ದರು. ಅಪಾರ ಭಕ್ತರ ಸಮ್ಮುಖದಲ್ಲಿ ನಡೆದ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು