ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ಸಂಭವಿಸಿದೆ.
ಜನವರಿ 4ರಂದು ಸಂಜೆ ಆದರ್ಶ ಕಾಲೋನಿಯಲ್ಲಿರುವ ಆಸ್ಪತ್ರೆಗೆ ಮಗನೊಂದಿಗೆ ಗಂಗಮ್ಮ ತೆರಳಿದ್ದರು, ಹಿಂದಿರುಗಿ ಬರುತ್ತಿದ್ದ ವೇಳೆ ಮಗ ಪ್ರೀತಂ ಮೇಲೆ ಏಕಾಏಕಿ ದಾಳಿ ನಡೆಸಿದೆ. ಕೆಳಗೆ ಬಿದ್ದು ಒದ್ದಾಡಿದರೂ ಕಾಲು ತೊಡೆ ಭಾಗಕ್ಕೆ ಬಲವಾಗಿ ಕಚ್ಚಿದ್ದು ರಕ್ಷಣೆಗೆಂದು ಹೋದ ತಾಯಿಗೂ ಕಚ್ಚಿದ. ನಾಯಿ ದಾಳಿಯಿಂದ ಮಗನ ರಕ್ಷಿಸಲು ಬಂದ ತಾಯಿಗೂ ಕಚ್ಚಿದೆ. ನಂತರ ಅಲ್ಲೇ ಇದ್ದ ಸ್ಥಳೀಯರು ಬೀದಿ ನಾಯಿಯನ್ನು ಓಡಿಸಿದ್ದಾರೆ.
ಘಟನೆಯ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.