ರಾಯಚೂರು: ತೆಲಂಗಾಣದೊಂದಿಗೆ ರಾಯಚೂರು ವಿಲೀನ ವಿಚಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ರಾಯಚೂರು ಜಿಲ್ಲೆ ಈಗಾಗಲೇ ಅಭಿವೃದ್ಧಿಯತ್ತ ಸಾಗಿದೆ. ತೆಲಂಗಾಣವು ಹಿಂದುಳಿದ ಪ್ರದೇಶವೆಂದು ಅವರು ಹೋರಾಟ ಮಾಡಿ, ಈಗ ಮುಖ್ಯಮಂತ್ರಿ ಆಗಿದ್ದಾರೆ. ತೆಲಂಗಾಣ ಅಭಿವೃದ್ಧಿ ಆಗದಿರುವುದನ್ನು ಮರೆಮಾಚಲು ಈ ಹೇಳಿಕೆ ನೀಡಿದ್ದಾರೆ ಎಂದರು.
ರಾಜಕೀಯ ಪ್ರೇರಿತವಾಗಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.
Photo credit- G Mohan