Categories: ಕಲಬುರಗಿ

ಬಂಧನದಿಂದ ಆರ್‌.ಡಿ. ಪಾಟೀಲ್‌ ಜಸ್ಟ್‌ಮಿಸ್‌, ಪೊಲೀಸರು ಬರುವ ಸ್ವಲ್ಪ ಮುಂಚೆ ಪರಾರಿ..!

ಕಲಬುರಗಿ:ಇತ್ತೀಚೆಗೆ ನಡೆದಂತಹ ರಾಜ್ಯದ ನಿಗಮ, ಮಂಡಳಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದಂತಹ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನಡೆದ ಪರೀಕ್ಷಾ ಅಕ್ರಮದಲ್ಲಿ ತನ್ನ ಹೆಸರು ಪ್ರಸ್ತಾಪವಾಗಿದ್ದಲ್ಲದೆ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಲಬುರಗಿಯಿಂದ ಪರಾರಿಯಾಗಿದ್ದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಸೋಮವಾರ ಕಲಬುರಗಿಯಲ್ಲೇ ದಿಢೀರ್‌ ಪ್ರತ್ಯಕ್ಷನಾದಾಗ, ಈತನ ಚಲನ ವಲನದ ಮೇಲೆ ನಿಗಾ ಇಟ್ಟಿದ್ದ ಕಲಬುರಗಿ ಪೊಲೀಸರು ಈತನ ಬಂಧನಕ್ಕೆ ಮುಂದಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ.

ಈ ಬಗ್ಗೆ ಸೋಮವಾರ ಸಂಜೆ ಕಲಬುರಗಿಯಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವಲ್ಲದೆ, ರಾತ್ರಿ 8 ಗಂಟೆಗೆ ಆರ್‌.ಡಿ ಪಾಟೀಲ್‌ ಬಂಧನದ ದಟ್ಟ ವದಂತಿಗಳು ಕೂಡಾ ಹರಡಿದ್ದವು. ಒಂದು ಹಂತದಲ್ಲಿ ಆರ್‌ ಡಿ ಪಾಟೀಲ್‌ನನ್ನು ಕಲಬುರಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆಂಬ ಸುದ್ದಿ ಹರಡಿತ್ತು. ಈ ಬಗ್ಗೆ  ಕಲಬುರಗಿ ನಗರ ಪೊಲೀಸ್‌ ಕಮೀಷನರ್‌ ಆರ್‌. ಚೇತನ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರನ್ನು ಸಂಪರ್ಕಿಸಿದಾಗ ಸದರಿ ಪ್ರಕರಣದಲ್ಲಿ ಆರ್‌ಡಿ ಪಾಟೀಲ್‌ ಬಂಧನದ ಬೆಳವಣಿಗೆಯನ್ನು ಅಲ್ಲಗಳೆದಿದ್ದಾರೆ.ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನಡೆದಂತಹ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್ಪೂರದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರ್‌ಡಿ ಪಾಟೀಲನನ್ನೇ ಪೊಲೀಸರು ಪ್ರಥಮ ಆರೋಪಿಯನ್ನಾಗಿ ಮಾಡಿದ್ದಾರೆ. ಇದಲ್ಲದೆ ಕಲಬುರಗಿಯ ಅಶೋಕ ನಗರ ಹಾಗೂ ವಿವಿ ಠಾಣೆಗಳಲ್ಲಿ ದಾಖಲಾಗಿರುವ ಪರೀಕ್ಷೆ ಅಕ್ರಮ ಸಂಬಂಧದ ಪ್ರಕರಣಗಳಲ್ಲಿಯೂ ಆರ್‌.ಡಿ ಪಾಟೀಲ್‌ ಹೆಸರು ಆರೋಪಿಗಳ ಪಟ್ಟಿಯಲ್ಲಿ ದಾಖಲಾಗಿದೆ. ಹೀಗಾಗಿ ಆರ್‌ಡಿ ಪಾಟೀಲ್‌ ಪರೀಕ್ಷಾ ಸಂಬಂಧಿ ಅಕ್ರಮದ ಪ್ರಕರಣಗಳಲ್ಲಿ ಕಲಬುರಗಿ ಪೊಲೀಸರಿಗೆ ಬೇಕಾಗಿದ್ದಾನೆ.

Umesha HS

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

17 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

41 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

55 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago