ವಿಜಯನಗರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.ಒಂದೇ ಶಾಲೆಯ 19 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಘಟನೆ ಹೊಸಪೇಟೆ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 19 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರನ್ನು ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಹೊಸಪೇಟೆ ಟಿ ಹೆಚ್ ಒ ಭಾಸ್ಕರ್ ಮಾಹಿತಿ ನೀಡಿದ್ದಾರೆ.