News Karnataka Kannada
Friday, May 03 2024
ವಿಜಯನಗರ

ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಮೃತ

Accident.
Photo Credit :

ವಿಜಯನಗರ: ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಟ್ರಾಕ್ಸ್ ಕ್ರೂಸರ್​ ಆಕ್ಸಲ್ ಕಟ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಚಾಲಕ ಸಿದ್ದಯ್ಯ ಕಾಳಗಿ (48), ಕಲ್ಲವ್ವ (60), ಕುಂತವ್ವ (50), ನೀಲಮ್ಮ (54) ಮತ್ತು ಲಕ್ಷ್ಮೀಬಾಯಿ (60) ಎಂದು ಗುರುತಿಸಲಾಗಿದೆ.ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂಡಿ ಗ್ರಾಮದವರು.

ನಿಡಗುಂದಿ ಗ್ರಾಮದ ಸುತ್ತಮುತ್ತಲಿನ ಜನರು ರಾಮೇಶ್ವರಕ್ಕೆ ಹೋಗುತ್ತಿದ್ದರು. ಈ ವೇಳೆ ಟ್ರಾಕ್ಸ್​ನ ಆಕ್ಸಲ್​ ಕಟ್​ ಆಗಿ ದುರಂತ ಸಂಭವಿಸಿದೆ. ಐವರು ಮೃತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಹರೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು