ವಿಜಯನಗರ

ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ; ಶ್ರೀನಿವಾಸ ಪೂಜಾರಿ

ಹೊಸಪೇಟೆ (ವಿಜಯನಗರ) : ‘ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ’ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಇತ್ತೀಚೆಗೆ ನನ್ನ ಇಲಾಖೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಆದರೆ, ಅನಂತರ ಆರೋಪಗಳನ್ನು ಮಾಡಿ ಟೀಕಿಸಿದ್ದಾರೆ. ಆರೋಪ, ಟೀಕೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ, ಸತ್ಯಕ್ಕೆ ಅಪಚಾರವಾಗುವ ರೀತಿಯಲ್ಲಿ ಆರೋಪ ಮಾಡಬಾರದು ಎಂದು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊಳವೆಬಾವಿ ಟೆಂಡರ್‌ ಸಂಪೂರ್ಣ ಪಾರದರ್ಶಕವಾಗಿ ನಡೆದಿದೆ. ಗುಣಮಟ್ಟದಲ್ಲಿ ಲೋಪದೋಷ ಕಂಡರೆ ಅನುದಾನ ಬಿಡುಗಡೆಗೊಳಿಸಿಲ್ಲ. ರೈತರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ಅಧಿಕಾರಿಗಳು ಸೇರಿದಂತೆ ಯಾರಿಂದಾದರೂ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು. ಶಾಸಕ ಪಿ.ರಾಜೀವ್ ಇದ್ದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago