ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಅಪಘಾತಕ್ಕೀಡಾಗಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ವಾಹನ ನೀಡಿ, ಕಾರ್ಯಕಾರಣಿ ನಡೆಯುವ ಸ್ಥಳಕ್ಕೆ, ಸುಮಾರು 5 ಕಿ. ಮೀ ನಷ್ಟು ದೂರ ಬೈಕಿನ ಮೂಲಕ ತೆರಳಿ ಮಾನವೀಯತೆ ಮೆರೆದಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿಯಲ್ಲಿ ಹೊಸಪೇಟೆ ಗ್ರಾಮೀಣ ಭಾಗದ ಹೊರ ವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಸಚಿವೆ, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.
ಬೈಕಿನಲ್ಲಿ ಸಮಾರಂಭದ ಸ್ಥಳಕ್ಕೆ ತೆರಳಿದ ಕೇಂದ್ರ ಸಚಿವರ ಈ ನಡೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.