ವಿಜಯನಗರ : ವಿಜಯನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ಮೌಲ್ಯದ ಒಂದೂವರೆ ಕೆ.ಜಿ. ತಿಮಿಂಗಲದ ವಾಂತಿ ವಶಕ್ಕೆ ಪಡೆದಿದ್ದಾರೆ.ಹೊಸಪೇಟೆ ಪಟ್ಟಣದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ 6 ಜನರನ್ನು ಬಂಧಿಸಿದ್ದಾರೆ.
ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೊಪ್ಪಳದ ವೆಂಕಟೇಶ್, ಅಬ್ದುಲ್ ವಾಹಬ್, ಮಹೇಶ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ್, ವಿಜಯಪುರದ ಶ್ರೀಧರ್ ನಲ್ಲಿ ಪೊಲೀಸರು ಬಂಧಿಸಿದ್ದು, ಒಂದೂವರೆ ಕೆ.ಜಿ. ತಿಮಿಂಗಿಲ ವಾಂತಿ ವಶಕ್ಕೆ ಪಡೆದಿದ್ದಾರೆ.