ಹೊಸಪೇಟೆ : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 17 ರವರೆಗೆ ಹಂಪಿ ಕ್ಷೇತ್ರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಂಕ್ರಮಣ ಹಬ್ಬದ ಪ್ರಯುಕ್ತ ಹಂಪಿಗೆ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಪ್ರತಿ ವರ್ಷ 10 ರಿಂದ 15 ಸಾವಿರ ಭಕ್ತಾಧಿಗಳು ಹಬ್ಬದ ಆಚರಣೆಯ ದಿನದ ಒಂದೆರಡು ದಿನ ಮುಂಚಿತವಾಗಿ ಬಂದು ವಾಸ್ತವ್ಯಯ ಮಾಡುತ್ತಾರೆ. ‘
ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ಜನ ಸಂದಣಿ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಹೊರಡಿಸಲಾಗಿದೆ.