News Karnataka Kannada
Saturday, April 27 2024
ವಿಜಯನಗರ

ಹಂಪಿ ಕನ್ನಡ ವಿಶ್ವವಿದ್ಯಾಲಯ: ಮೂವರಿಗೆ ನಾಡೋಜ ಗೌರವ

Hampi Kannada University: Nadoja honours three
Photo Credit : News Kannada

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ (ಘಟಿಕೋತ್ಸವ) ಜನವರಿ 10ರಂದು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ನಾಡೋಜ ಗೌರವಕ್ಕೆ ಸಮಾಜಸೇವೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಕನ್ನಡ ಸ್ವಾಮೀಜಿ ಎಂದೇ ಖ್ಯಾತರಾದ ಭಾಲ್ಕಿ ವಿರಕ್ತಮಠದ ಬಸವಲಿಂಗ ಪಟ್ಟದೇವರು, ಆಂಧ್ರಪ್ರದೇಶದ ಬುಡಕಟ್ಟು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ತೇಜಸ್ವಿ ಕಟ್ಟಿಮನಿ (ಧಾರವಾಡ) ಹಾಗೂ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ನ್ಯಾನೊ ಕ್ಷೇತ್ರದಲ್ಲಿ ಸಾಧನೆ ಮಾಡಿದ “ನ್ಯಾಕ್” ನಿವೃತ್ತ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ (ಬೆಂಗಳೂರು) ಅವರು ಭಾಜನರಾಗಿದ್ದಾರೆ .

ಜ.10ರಂದು ಸಂಜೆ 5 ಗಂಟೆಗೆ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್ ಅವರು ಪದವಿ ಪ್ರದಾನ ಮಾಡಲಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಅವರು ಈ ವಿಷಯ ಪ್ರಕಟಿಸಿದರು.

ಈ ಬಾರಿ ದಾಖಲೆಯ 264 ವಿದ್ಯಾರ್ಥಿಗಳು ಪಿಎಚ್.ಡಿ ಪದವಿಯನ್ನು ಪಡೆಯಲಿದ್ದಾರೆ. ಕಳೆದ ವರ್ಷ 166 ಮಂದಿ ಪಿಎಚ್.ಡಿ ಪಡೆದುದು ಇದುವರೆಗಿನ ದಾಖಲೆಯಾಗಿತ್ತು ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಡಿ.ಲಿಟ್ ಹಾಗೂ ಪಿಎಚ್.ಡಿ ಪ್ರದಾನ ಮಾಡಲಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ. ಕೋರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.

ವಿಶ್ವವಿದ್ಯಾಲಯ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ, ಈ ಬಜೆಟ್‌ನಲ್ಲಿ ಸರ್ಕಾರ ಅಗತ್ಯದ ಅನುದಾನ ನೀಡುವ ವಿಶ್ವಾಸ ಇದೆ ಎಂದು ಕುಲಪತಿ ಹೇಳಿದರು. ಕುಲಸಚಿವ ಡಾ.ವಿಜಯ ಪೂಣಚ್ಚ, ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು