ವಿಜಯನಗರ: ಜಿಲ್ಲೆಯ ಹರಪನಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಪೆಟ್ರೋಲ್ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಓರ್ವ ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪೆಟ್ರೋಲ್ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಪೆಟ್ರೋಲ್ ಟ್ಯಾಂಕರ್ ಅಡಿಗೆ ಸಿಲುಕಿಕೊಂಡಿದ್ದು, ಆತನ ಮೇಲೆ ಪೆಟ್ರೋಲ್ ಚೆಲ್ಲಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸಜೀವ ದಹನಗೊಂಡಿದ್ದಾನೆ.