ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಲಾಡ್ಜ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಂಗವಿಕಲರು, ಅಪ್ರಾಪ್ತೆಯರನ್ನು ಸಹ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಲಾಡ್ಜ್ ನಲ್ಲಿ ಹೀನಾಯ ಸ್ಥಿತಿಯಲ್ಲಿ ಅಡಗುತಾಣಗಳು ಮಾಡಿಕೊಂಡು ಸ್ವಾಗತಕಾರನ ಕಾಲಿನ ಕೆಳಗೆ ಎಚ್ಚರಿಕೆ ಗಂಟೆಯ ವ್ಯವಸ್ಥೆ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ಕಾಲಿನಿಂದಲೇ ಬೆಲ್ ಒತ್ತಿ ಎಚ್ಚರಿಸುತ್ತಿದ್ದರು ಎನ್ನಲಾಗಿದೆ.
ಒಡನಾಡಿ ಸೇವಾ ಸಂಸ್ಥೆಯ ಸಂಘಟಕ ಶರಿಲ್ ಎ ಅಂತೋನಿ ನೀಡಿದ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.